Featured

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ – Vishwanews24

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ

ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಕಡೂರು ತಾಲೂಕಿನ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.

ಪ್ರಮೋದ್‌ ಎಂಬಾತ ಮೃತಪಟ್ಟಿದ್ದ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿದ್ದಾರೆ. ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದ್ದು, ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.

ಎರಡು ದಿನದ ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ.

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ .. ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ

Vishwa News 24

Recent Posts

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

10 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

19 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

35 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

57 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago