ಚಿಕ್ಕಮಗಳೂರು: ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಭಾರೀ ಗಾಳಿಗೆ ಮರ ಬುಡಸಮೇತ ಉರುಳಿ ಪ್ರವಾಸಿ ಬೈಕ್ ಮೇಲೆ ಬಿದ್ದಿದೆ. ಮರದ ತುದಿ ಭಾಗ ಮಾತ್ರ ಬೈಕ್ಗೆ ತಗುಲಿದ್ದರಿಂದ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿಯ ತೇವಾಂಶ ಇನ್ನೂ ಹೆಚ್ಚಿರುವುದರಿಂದ ಹಲವೆಡೆ ಮಣ್ಣು ಕುಸಿಯುವ ಘಟನೆಗಳು ವರದಿಯಾಗುತ್ತಿವೆ. ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದಲ್ಲೂ ಅಲ್ಲಲ್ಲಿ ಭೂ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರದಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…