ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರವನ್ನ ನಿಷೇಧಿಸಲಾಗಿದೆ.
ಕಳೆದೆರಡು ವಾರದಿಂದ ಹೆಚ್ಚಿನ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಭೂಕುಸಿತ, ಸೇತುವೆಗಳಿಗೆ ಹಾನಿಯಾಗಿ ಚರಂಡಿ/ಮೋರಿಗಳು ತುಂಬಿ ಹರಿಯುತ್ತಿದ್ದು, ಹಾಗೂ ದೊಡ್ಡ ಗಾತ್ರದ ಮರಗಳು ಉರುಳಿ ರಸ್ತೆ ಹಾನಿಯಾಗಿದೆ.
ಈ ಸಮಯದಲ್ಲಿ ಭಾರೀ ವಾಹನಗಳು ಅಧಿಕ ಭಾರವನ್ನು ಹೊತ್ತುಕೊಂಡು ರಸ್ತೆಗಳಲ್ಲಿ ಸಂಚರಿಸಿದರೆ ಸೇತುವೆಗಳಿಗೆ ಇನ್ನಷ್ಟು ಹಾನಿಯಾಗಬಹುದು. ಹೀಗಾಗಿ ಜಿಲ್ಲೆಯಾದ್ಯಂತ 12,000 ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯನಗಿರಿ, ಮಾಣಿಕ್ಯದಾರ, ಗಾಳಿಕೆರೆ, ದಬ್ ದಬೆ ಫಾಲ್ಸ್ ಹಾಗೂ ಇತರೆ ಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯ ಕಾರಣದಿಂದ ಕೈಮರ ಚೆಕ್ ಪೋಸ್ಟ್ ನಿಂದ ಹಾಗೂ ಕೆಮ್ಮಣ್ಣು ಗುಂಡಿ ಕ್ರಾಸ್ ನಿಂದ ಬಾಬಾ ಬುಡನ್ ದರ್ಗಾ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…