ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರವನ್ನ ನಿಷೇಧಿಸಲಾಗಿದೆ.
ಕಳೆದೆರಡು ವಾರದಿಂದ ಹೆಚ್ಚಿನ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಭೂಕುಸಿತ, ಸೇತುವೆಗಳಿಗೆ ಹಾನಿಯಾಗಿ ಚರಂಡಿ/ಮೋರಿಗಳು ತುಂಬಿ ಹರಿಯುತ್ತಿದ್ದು, ಹಾಗೂ ದೊಡ್ಡ ಗಾತ್ರದ ಮರಗಳು ಉರುಳಿ ರಸ್ತೆ ಹಾನಿಯಾಗಿದೆ.
ಈ ಸಮಯದಲ್ಲಿ ಭಾರೀ ವಾಹನಗಳು ಅಧಿಕ ಭಾರವನ್ನು ಹೊತ್ತುಕೊಂಡು ರಸ್ತೆಗಳಲ್ಲಿ ಸಂಚರಿಸಿದರೆ ಸೇತುವೆಗಳಿಗೆ ಇನ್ನಷ್ಟು ಹಾನಿಯಾಗಬಹುದು. ಹೀಗಾಗಿ ಜಿಲ್ಲೆಯಾದ್ಯಂತ 12,000 ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯನಗಿರಿ, ಮಾಣಿಕ್ಯದಾರ, ಗಾಳಿಕೆರೆ, ದಬ್ ದಬೆ ಫಾಲ್ಸ್ ಹಾಗೂ ಇತರೆ ಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯ ಕಾರಣದಿಂದ ಕೈಮರ ಚೆಕ್ ಪೋಸ್ಟ್ ನಿಂದ ಹಾಗೂ ಕೆಮ್ಮಣ್ಣು ಗುಂಡಿ ಕ್ರಾಸ್ ನಿಂದ ಬಾಬಾ ಬುಡನ್ ದರ್ಗಾ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…