ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರಿ ವಾಹನ ಸಂಚಾರವನ್ನ ನಿಷೇಧಿಸಲಾಗಿದೆ.
ಕಳೆದೆರಡು ವಾರದಿಂದ ಹೆಚ್ಚಿನ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಭೂಕುಸಿತ, ಸೇತುವೆಗಳಿಗೆ ಹಾನಿಯಾಗಿ ಚರಂಡಿ/ಮೋರಿಗಳು ತುಂಬಿ ಹರಿಯುತ್ತಿದ್ದು, ಹಾಗೂ ದೊಡ್ಡ ಗಾತ್ರದ ಮರಗಳು ಉರುಳಿ ರಸ್ತೆ ಹಾನಿಯಾಗಿದೆ.
ಈ ಸಮಯದಲ್ಲಿ ಭಾರೀ ವಾಹನಗಳು ಅಧಿಕ ಭಾರವನ್ನು ಹೊತ್ತುಕೊಂಡು ರಸ್ತೆಗಳಲ್ಲಿ ಸಂಚರಿಸಿದರೆ ಸೇತುವೆಗಳಿಗೆ ಇನ್ನಷ್ಟು ಹಾನಿಯಾಗಬಹುದು. ಹೀಗಾಗಿ ಜಿಲ್ಲೆಯಾದ್ಯಂತ 12,000 ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.
ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯನಗಿರಿ, ಮಾಣಿಕ್ಯದಾರ, ಗಾಳಿಕೆರೆ, ದಬ್ ದಬೆ ಫಾಲ್ಸ್ ಹಾಗೂ ಇತರೆ ಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯ ಕಾರಣದಿಂದ ಕೈಮರ ಚೆಕ್ ಪೋಸ್ಟ್ ನಿಂದ ಹಾಗೂ ಕೆಮ್ಮಣ್ಣು ಗುಂಡಿ ಕ್ರಾಸ್ ನಿಂದ ಬಾಬಾ ಬುಡನ್ ದರ್ಗಾ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…