ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದಳು. ಏಪ್ರಿಲ್ 7ರ ಮಂಗಳವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಜಾಲಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ಬಾಲಕಿಯನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೋಧ ನಡೆಸುತ್ತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…