Featured

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ – vishwanews24

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.

ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದಳು. ಏಪ್ರಿಲ್ 7ರ ಮಂಗಳವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.

ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿದ್ದರು.

ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಜಾಲಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ಬಾಲಕಿಯನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

3 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

3 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

5 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

5 hours ago