ಚಿಕ್ಕಮಗಳೂರು, : ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣುಮೆ ಪೂಜೆ ನಡೆಸುತ್ತಿದ್ದಾರೆ. ಹುಣ್ಣಿಮೆ ಪೂಜೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇನ್ನು ಹುಣ್ಣಿಮೆ ಪೂಜೆಯಂದು ದತ್ತ ಪಾದುಕೆ ದರ್ಶನ, ಪೂಜೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಪ್ರತಿ ಹುಣ್ಣುಮೆ ದಿನ ಭಜರಂಗದಳ, VHP ಕಾರ್ಯಕರ್ತರು ದತ್ತ ಪಾದುಕೆಗೆ ಪೂಜೆ ಸಲ್ಲಿಸುತ್ತಿದ್ದರು. ಈಗ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನೆರವೇರಿಸಲಿದ್ದಾರೆ. ಬೈಕ್ ಜಾಥಾದ ಮೂಲಕ ಕಾರ್ಯಕರ್ತರು, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಲಿದ್ದಾರೆ. ಡಿಸೆಂಬರ್ 17 ರಿಂದ ದತ್ತಜಯಂತಿ ಆರಂಭವಾಗಲಿದೆ.
ಸಂಪೂರ್ಣ ಹಿಂದು ಪೀಠಕ್ಕಾಗಿ ಆಗ್ರಹಿಸಿ ದತ್ತಜಯಂತಿ ನಡೆಯುತ್ತೆ. ಹಿಂದೂ ಪೀಠಕ್ಕಾಗಿ ಹೋರಾಟದ ಜೊತೆಗೆ ರಾಜಕೀಯವಾಗಿ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಭಾರಿ ಚರ್ಚೆಯಲ್ಲಿರುತ್ತದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಗೆಲುವಿಗೆ ದತ್ತಪೀಠ ಹೋರಾಟ ಪ್ರಮುಖ ಕಾರಣವಾಗಿತ್ತು. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ದಕ್ಷಿಣ ಭಾರತದ ಅಯೋಧ್ಯೆ ಎಂದೇ ಕರೆಯಲಾಗುತ್ತೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…