ಇಂದು ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ನಿಲ್ಲಿಸುವಂತೆ ಲೋಕೋ ಪೈಲಟ್ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು ಈ ವೇಳೆ ರೈಲ್ವೆ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 45 ನಿಮಿಷಗಳ ಬಳಿಕ ರೈಲು ತಡವಾಗಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿತು.
ಈ ಸ್ಥಳದ ಹಳಿ ಪಕ್ಕದಲ್ಲೇ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ರೈಲ್ವೇ ಸಿಬ್ಬಂದಿ ನೀರನ್ನು ಸರಾಗವಾಗಿ ಹರಿಯುವಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಘಟನೆ ನಡೆದಿರುವ ಕಣಿವೆ ಹಳ್ಳಿಯೂ ಚಿಕ್ಕಮಗಳೂರು ರೈಲ್ವೇ ನಿಲ್ದಾಣದಿಂದ 10 ಕಿ.ಮೀ ಅಂತರದಲ್ಲಿದ್ದ ಕಾರಣ ರೈಲಿನ ವೇಗವು ಕಡಿಮೆ ಇತ್ತು. ಇಂದು ಬೆಳಗ್ಗೆ 7:10ಕ್ಕೆ ರೈಲ್ವೆ ನಿಲ್ದಾಣದಿಂದ ಹೊರಟಿದ್ದ ಪ್ಯಾಸೆಂಜರ್ ರೈಲು 7.30ರ ವೇಳೆಗೆ ಕಣಿವೆಹಳ್ಳಿಗೆ ತಲುಪಿತ್ತು.
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…