Featured

ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  :  ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್  – ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು  – Vishwanews24

ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  :  ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್  – ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ  ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಸ್ವಲ್ಪ ಹೊತ್ತಿನ ಬಳಿಕ ನನ್ನನ್ನು ಕರೆತಂದು ಹಾಸ್ಟೆಲ್ ಬಳಿ ಬಿಟ್ಟು ಹೋಗಿದ್ದರು. ಮರುದಿನ ಮತ್ತೆ ಕರೆದಾಗ ನಾನು ಬರುವುದಿಲ್ಲ ಎಂದು ಹೇಳಿದ್ದಕ್ಕೆ ನನ್ನ ಖಾಸಗಿ ಫೋಟೋಗಳನ್ನು ನನಗೆ ಕಳುಹಿಸಿ, ಬರದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ ಮಾಡುತ್ತೇನೆ ಎಂದು ಹೆದರಿಸುತ್ತಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಮಗಳನ್ನು ಕೊಂದು, ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಎಸೆದ ತಂದೆ – Vishwanews24

ಹೀಗೆ, ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ದೂರಿದ್ದಾಳೆ.

ಈಗ ಮೊಹಮದ್ ರೌಫ್ ವಿದೇಶದಲ್ಲಿ ಕೂತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನ ಡಿಲೀಟ್ ಮಾಡಿಸಿ ಮೊಹಮದ್ ರೌಫ್, ಇರ್ಫಾನ್ ಹಾಗೂ ಸೈಫ್ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವತಿ ಮನವಿ ಮಾಡಿದ್ದಾಳೆ. ಇದನ್ನೂ ಓದಿ : 📛 ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ..

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago