ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರಕಾರಿ ಶಾಲೆಯ ಅತಿಥಿ ಶಿಕ್ಷಕಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42)ರ ಸಂಬಂಧಿಕನೇ ಆಗಿರುವ ಭವಿತ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೇಮ ವೈಫಲ್ಯವೇ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ.
ಭವಿತ್ ಶಿಕ್ಷಕಿ ಅಪೂರ್ವರನ್ನು ಪ್ರೀತಿಸುತ್ತಿದ್ದು, ಅಪೂರ್ವ ಪ್ರೀತಿಯನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಭವಿತ್ ಮಂಗಳವಾರ ಸಂಜೆ ಅಪೂರ್ವ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಾರಿಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾನೆ. ಅಪೂರ್ವರನ್ನು ಅಡಿಕೆಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅಪೂರ್ವ ಪ್ರಜ್ವಾಹೀನ ಸ್ಥಿತಿಗೆ ತಲುಪಿದ್ದರು. ಸ್ಥಳೀಯರು ಗಮನಿಸಿ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಕ್ಷಕಿಯನ್ನು ದಾಖಲಿಸಲಾಗಿದೆ.
ಹಲ್ಲೆ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಬುಧವಾರ ಆತನನ್ನು ಬಂಧಿಸಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…