ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರಕಾರಿ ಶಾಲೆಯ ಅತಿಥಿ ಶಿಕ್ಷಕಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42)ರ ಸಂಬಂಧಿಕನೇ ಆಗಿರುವ ಭವಿತ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೇಮ ವೈಫಲ್ಯವೇ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ.
ಭವಿತ್ ಶಿಕ್ಷಕಿ ಅಪೂರ್ವರನ್ನು ಪ್ರೀತಿಸುತ್ತಿದ್ದು, ಅಪೂರ್ವ ಪ್ರೀತಿಯನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಭವಿತ್ ಮಂಗಳವಾರ ಸಂಜೆ ಅಪೂರ್ವ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಾರಿಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾನೆ. ಅಪೂರ್ವರನ್ನು ಅಡಿಕೆಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅಪೂರ್ವ ಪ್ರಜ್ವಾಹೀನ ಸ್ಥಿತಿಗೆ ತಲುಪಿದ್ದರು. ಸ್ಥಳೀಯರು ಗಮನಿಸಿ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಕ್ಷಕಿಯನ್ನು ದಾಖಲಿಸಲಾಗಿದೆ.
ಹಲ್ಲೆ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಬುಧವಾರ ಆತನನ್ನು ಬಂಧಿಸಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…