Featured

ಚಿಕ್ಕಮಗಳೂರು : ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ – Vishwanews24

ಚಿಕ್ಕಮಗಳೂರು : ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದವನಿಗೆ ಜೈಲು ಶಿಕ್ಷೆಯಾಗಿದೆ. ಶೃಂಗೇರಿಯ ಶಾರದಾ ಪೀಠದ ಭಾರತೀತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಹಾಕಿದ್ದ ಮುನ್ನ ಅಜರ್ ಎಂಬಾತನಿಗೆ ಇಂದು (ಮಂಗಳವಾರ) ಶೃಂಗೇರಿಯ ನ್ಯಾಯಾಲಯ ದಂಡದ ಜೊತೆಗೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಶೃಂಗೇರಿ ಶಾರದಾಪೀಠದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ವಿರುದ್ಧವಾಗಿ ಅವಹೇಳನಕಾರಿಯಾಗಿ ಫೇಸ್ಬುಕ್ ಪೇಜ್ ಒಂದರಲ್ಲಿ ಪೋಸ್ಟ್ ಹಾಕಿದ್ದ ಮುನ್ನಾ ಅಜರ್ ಎಂಬುವವನಿಗೆ ಶೃಂಗೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು ಮೂರುವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 3300 ರೂಪಾಯಿಗಳ ದಂಡವನ್ನು ವಿಧಿಸಿ ಆದೇಶಿಸಿದೆ. 2015 ರ ನವೆಂಬರ್ 19 ರಂದು ಫೇಸ್ಬುಕ್ ನಲ್ಲಿ ಜಗದ್ಗುರುಗಳ ಕುರಿತಾಗಿ ಮುನ್ನಾ ಅಜರ್ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ, ಈ ಕುರಿತಾಗಿ ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಹಾಗೂ ಶ್ರೀಗಳ ಭಕ್ತರು ಅನೇಕ ಸಂಖ್ಯೆಯಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದರು. ಆರೋಪಿಯನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಪ್ರಕರಣದ ಹಿನ್ನೆಲೆ 
ಶೃಂಗೇರಿ ಹಿಂದೂಸ್ (ಕರ್ನಾಟಕ ಹಿಂದೂಸ್) ಎಂಬ ಫೇಸ್ಬುಕ್ ಪೇಜ್ ನಲ್ಲಿ ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತು ಮಾಹಿತಿ ನೀಡುವ ಪೋಸ್ಟ್ ಒಂದನ್ನು ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಸಹ ಇತ್ತು. ಮುನ್ನ ಅಜರ್ ಎಂಬ ಕಿಡಿಗೇಡಿ ಆ ಪೋಸ್ಟ್ ಗೆ ಅವ್ಯಾಚ್ಯ ಪದಗಳನ್ನು ಬಳಸಿ ಆಕ್ಷೇಪಾರ್ಹ ಕಮೆಂಟ್ ಗಳನ್ನು ಹಾಕಿದ್ದನ್ನು, ಈ ಕುರಿತು ಭಕ್ತ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಶೃಂಗೇರಿಯಲ್ಲಿ ಪ್ರತಿಭಟನೆ ಸಹ ನಡೆದಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲವೇ ದಿನಗಳಲ್ಲಿ ಹುಬ್ಬಳ್ಳಿ ಮೂಲಕ ಆರೋಪಿ ಮುನ್ನ ಅಜರ್ ಎಂಬುವವನನ್ನು ಹೆಡೆಮುರಿ ಕಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಧೀರ್ ಹೆಗ್ಡೆ ನೇತೃತ್ವದ ತನಿಖಾ ತಂಡ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.ಪ್ರಸ್ತುತ ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂದಂಡವನ್ನು ವಿಧಿಸಿ ಶೃಂಗೇರಿಯ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು 2015 ರಲ್ಲಿ ಶೃಂಗೇರಿ ಠಾಣೆಯ ವೃತ್ತನಿರೀಕ್ಷಕರಾಗಿದ್ದ ಸುಧೀರ್ ಎಂ. ಹೆಗ್ಡೆ ನಡೆಸಿ ಆರೋಪಿಯನ್ನು ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಯ ವಿರುದ್ಧವಾಗಿ ವಕೀಲೆ ಹರೀಣಾಕ್ಷಿವಾದ ಮಂಡನೆ ನಡೆಸಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

8 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

14 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

15 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

16 hours ago