ಚಿಕ್ಕಮಗಳೂರು: ಕರ್ನಾಟಕ ಎಲ್ಲಾ ಭಾಷೆ-ಧರ್ಮ-ಸಮುದಾಯದ ರಾಜ್ಯ. ನಾವು ಬೆಂಗಳೂರಿಗೆ ಹೋದರೆ ತುಂಬಾ ಜಾಗಗಳಲ್ಲಿ ಕನ್ನಡ ಕೇಳಿಸುವುದಿಲ್ಲ. ಆದರೂ ಸಹಿಸಿಕೊಂಡಿದ್ದೇವೆ. ಒಟ್ಟಿಗೆ ಬದುಕುತ್ತಿದ್ದೇವೆ. ಸಂಸ್ಕೃತ ಎಲ್ಲಾ ಭಾಷೆಗಳಿಗೂ ಮೂಲ ಭಾಷೆ. ಮಾತೃ ಭಾಷೆ. ಸಂಸ್ಕೃತ ಕಲಿಯುವುದು ತುಂಬ ಅಗತ್ಯವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಗರದ ಸಂಸದರ ಕಚೇರಿಯಲ್ಲಿ ಮಾತನಾಡಿದ ಅವರು, ಸಂಸ್ಕೃತದಿಂದ ಹಲವು ವಿಚಾರಗಳನ್ನು ಕಲಿಯಬಹುದು. ನಮ್ಮ ಭಾಷೆಯನ್ನು ಬೆಳೆಸಲು ಏನು ಬೇಕೋ ಅದನ್ನು ಮಾಡೋಣ. ಇನ್ನೊಂದು ಭಾಷೆ ಬೇಡ ಅನ್ನುವಂತದ್ದು ಸರಿಯಲ್ಲ. ಸರ್ಕಾರ ಇದನ್ನು ಯಾವ ದೃಷ್ಠಿಕೋನದಿಂದ ಮಾಡಿದೆಯೋ ಗೊತ್ತಿಲ್ಲ. ಕನ್ನಡದ ಜೊತೆ ಬೇರೆ ಭಾಷೆಗಳಿಗೂ ಆದ್ಯತೆ ಸಿಗಬೇಕು. ಇದು ನಮ್ಮ ಕರ್ನಾಟಕ. ವಿವಿಧತೆಯಲ್ಲಿ ಏಕತೆಯ ದೇಶ ಹೇಗೋ ಅದೇ ರೀತಿ ನಮ್ಮ ಕರ್ನಾಟಕ ಕೂಡ ವಿವಿಧತೆಯಲ್ಲಿ ಏಕತೆಯ ರಾಜ್ಯ. ಅವರಿಗೂ ಆದ್ಯತೆ ಸಿಗಲಿ. ನಮಗೆ ಇನ್ನೂ ಹೆಚ್ಚಿನ ಆದ್ಯತೆ ಸಿಗಲಿ. ನಾವು ಯಾವುದೇ ವರ್ಗವನ್ನ ಓಲೈಕೆ ಮಾಡುವುದಿಲ್ಲ ಎಂದಿದ್ದಾರೆ.
ಯಾವ ಭಾಷೆ ಕೂಡ ಒಂದು ಜಾತಿಯ ಭಾಷೆ ಅಲ್ಲ. ಉರ್ದು ಒಂದು ಜಾತಿಯ ಭಾಷೆ ಇರಬಹುದು. ಉಳಿದಂತೆ ಭಾರತದ ದೇಶೀಯ ಭಾಷೆಗಳು ಯಾವುದೋ ಒಂದು ಜಾತಿಯ ಭಾಷೆ ಅಲ್ಲ. ಯಾವುದೇ ಧರ್ಮದ ಭಾಷೆ ಅಲ್ಲ. ಎಲ್ಲರ ಭಾಷೆ. ಎಲ್ಲಾ ಜಾತಿಯವರು ಎಲ್ಲಾ ಭಾಷೆಯನ್ನು ಕಲಿಯಬಹುದು. ಇಂದು ಸಂಸ್ಕೃತವನ್ನ ಕೇವಲ ಮೇಲ್ವರ್ಗದ ಜನ ಮಾತ್ರ ಕಲಿತಿಲ್ಲ. ಎಲ್ಲಾ ವರ್ಗದ ಜನ, ಮಠ, ಸ್ವಾಮೀಜಿಗಳು ಸಂಸ್ಕೃತ ಪಾಠ ಶಾಲೆ ಇಟ್ಟುಕೊಂಡಿದ್ದಾರೆ. ಸಂಸ್ಕೃತ ಕಲಿತರೆ ಬೇರೆ-ಬೇರೆ ಅಧ್ಯಯನ ಮಾಡಬಹುದು. ಯೋಗ, ಆಯುರ್ವೇದ, ಹಿಂದೆ ಹೇಗಿತ್ತು. ತಂತ್ರಜ್ಞಾನ ಏನು ಎಲ್ಲವನ್ನೂ ತಿಳಿದುಕೊಳ್ಳಬಹುದು. ಸಂಸ್ಕೃತ ಯಾವುದೇ ಒಂದು ಜಾತಿ-ಭಾಷೆ-ಧರ್ಮಕ್ಕೆ ಸೀಮಿತವಾಗಿಲ್ಲ. ಸಂಕುಚಿತ ದೃಷ್ಟಿಕೋನದಿಂದ ಇದನ್ನು ಯೋಚಿಸಬಾರದು. ಎಲ್ಲರೂ ಕಲಿಯಲು ಅವಕಾಶವಿದೆ. ಎಲ್ಲರೂ ಕಲಿಯಬಹುದು ಎಂದು ಹೇಳಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…