Featured

ಚಿಕ್ಕಮಗಳೂರು :ಸಿದ್ದರಾಮಯ್ಯ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿ : ಶೋಭಾ ಕರಂದ್ಲಾಜೆ ವಾಗ್ದಾಳಿ – Vishwanews24

ಯೋಜನೆಗಳನ್ನು ಘೋಷಿಸು ವಾಗ ನಿಮ್ಮ ತಲೆಯಲ್ಲಿ ಮೆದುಳು ಇರಲಿಲ್ವಾ ..

ಚುನಾವಣೆಯನ್ನ ಗೆಲ್ಲುವುದಕ್ಕೆ ಇಲ್ಲದ ಭರವಸೆ ಕೊಟ್ಟು, ಆಸೆ ತೋರಿಸಿದ್ರಿ..

ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ ..

ಎಲ್ಲದಕ್ಕೂ ಮೋದಿ ತೋರಿಸುವುದಾದರೆ, ನೀವು ಗ್ಯಾರಂಟಿ ಕಾರ್ಡ್ ಏಕೆ ಹಂಚಿದ್ರಿ : ಕರಂದ್ಲಾಜೆ

ಚಿಕ್ಕಮಗಳೂರು :ಸಿದ್ದರಾಮಯ್ಯ ಮರ್ಯಾದೆ ಇಲ್ಲದ, ಬೇಜವಾಬ್ದಾರಿ ಮುಖ್ಯಮಂತ್ರಿ ಎಂದು ಕೇಂದ್ರ ಕೃಷಿ‌ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

ಬುಧವಾರ ನಗರದಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಯೋಜನೆಗಳನ್ನು ಘೋಷಿಸು ವಾಗ ನಿಮ್ಮ ತಲೆಯಲ್ಲಿ ಮೆದುಳು ಇರಲಿಲ್ವಾ ಎಂದು ಪ್ರಶ್ನಿಸಿದರು.

ಮೋದಿ ಅಕ್ಕಿ ಸೇರಿ ನೀವು 10 ಕೆ.ಜಿ. ಅಕ್ಕಿ ಕೊಡಬೇಡಿ, ಕೇಂದ್ರ ದ 5 ಕೆ.ಜಿ. ಅಕ್ಕಿ ಜೊತೆ ನೀವು 10 ಕೆ.ಜಿ.ಕೊಡಿ, ಒಬ್ಬರಿಗೆ 15 ಕೆ.ಜಿ.ಅಕ್ಕಿ ಕೊಡಿ ಎಂದರು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ, ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ. ಕಾಂಗ್ರೆಸ್ಸಿಗರಿಗೆ ಮಾನ ಮರ್ಯಾದೆ ಇಲ್ಲ, ವೋಟು ತೆಗೆದುಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯ ನವರೇ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ ಎಂದರು.
ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನ ಗೆಲ್ಲುವುದಕ್ಕೆ ಇಲ್ಲದ ಭರವಸೆ ಕೊಟ್ಟು, ಆಸೆ ತೋರಿಸಿದ್ರಿ, ಮಹಿಳೆಯರ ಬಸ್ಸಿಗೆ ಪಾಸ್ ಕೇಳುತ್ತಿದ್ದಾರೆ, ಸರ್ಟಿಫಿಕೇಟ್ ಕೇಳ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದರು.

ಅಕ್ಕಿ ಕೊಡೋದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಈಗ ಯಾಕೆ ನೀವು ಮೋದಿ ಕಡೆ ಬೆರಳು ತೋರಿಸುತ್ತೀರಾ, ಯಾವುದೇ ಮುಂದಾಲೋಚನೆ ಇಲ್ಲದೆ ಘೋಷಿಸಿ ಇವತ್ತು ಮೋದಿ ಕಡೆ ತೋರಿಸುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಅಂದೆ ಕೇಳಿದ್ವಿ, ಇವಕ್ಕೆಲ್ಲಾ ಹಣ ಎಲ್ಲಿಂದ ತರುತ್ತೀರಾ ಎಂದು ಇವತ್ತು ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ, ಎಲ್ಲದಕ್ಕೂ ಮೋದಿ ತೋರಿಸುವುದಾದರೆ, ನೀವು ಗ್ಯಾರಂಟಿ ಕಾರ್ಡ್ ಏಕೆ ಹಂಚಿದ್ರಿ ಎಂದು ಪ್ರಶ್ನಿಸಿದರು.

ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಹಂಚುದ್ರಿ, ಬಫರ್ ಸ್ಟಾಕ್‌ ಇರೋದು ನೆರೆ, ಬರ, ಯುದ್ಧದ ಸಂದರ್ಭದಲ್ಲಿ ಬಳಕೆಗೆ, ಬೇರೆ ರಾಜ್ಯ ಹಾಗೂ‌ ನಮ್ಮ ರಾಜ್ಯದ ರೈತರ ಅಕ್ಕಿ ಖರೀದಿಸಿ ಎಂದು ಸಲಹೆ ನೀಡಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago