ಚಿಕ್ಕಮಗಳೂರು : ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ.
ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿ ವರುಣ್ ದೇಸಾಯಿ (19) ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ 2 ಬೈಕಿನಲ್ಲಿ ಐವರು ಸ್ಮೇಹಿತರು ಜಲಪಾತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿದೆ. ಸೆಲ್ಫಿ ತೆಗೆಯುವ ವೇಳೆ ವರುಣ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ನಂತರ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ.
ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…