ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ.
ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು ಕೆಸರಾಯಿತೆಂದು ಹಳ್ಳದಲ್ಲಿ ತೊಳೆದುಕೊಳ್ಳುವ ವೇಳೆ ಆಯಾತಪ್ಪಿ ಬಿದ್ದ ಒಂದನೇ ತರಗತಿ ಬಾಲಕಿ ಸುಪ್ರಿತಾ ನೀರಿನಲ್ಲಿ ಕೊಚ್ಚಿ ಹೋಗಿದ್ದಳು. ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯ ಈಜು ಪಟುಗಳು 15 ಕಿ.ಮೀ ಉದ್ದದ ಹಳ್ಳದಲ್ಲಿ ಬಾಲಕಿಗಾಗಿ ಹುಡುಕಾಡಿದರು. ಬಾಲಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಿಂದ 20 ಜನರ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಎಸ್.ಡಿ.ಆರ್.ಎಫ್. ತಂಡದ ಜೊತೆ ಉಡುಪಿ ಜಿಲ್ಲೆಯ ಮಲ್ಪೆಯಿಂದ ಮುಳುಗು ತಜ್ಞ ಈಶ್ವರ್ ಕೂಡ ಆಗಮಿಸಿದ್ದಾರೆ.
ಎಸ್.ಡಿ.ಆರ್.ಎಫ್ ಮುಳುಗುತಜ್ಞರ ಜೊತೆ 35ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ 20ಕ್ಕೂ ಹೆಚ್ಚು ಈಜು ಪಟುಗಳು ಸಾಥ್ ನೀಡಿದ್ದಾರೆ. ಇಂದು ಬಾಲಕಿಯ ಪತ್ತೆಗೆ ಸುಮಾರು 60 ರಿಂದ 70 ಜನ ಕಾರ್ಯಾಚರಣೆಗೆ ಇಳಿದಿದ್ದಾರೆ. ಒಂದು ಸುತ್ತು ಹಳ್ಳ ಹರಿಯುವ ಮಾರ್ಗದಲ್ಲಿ ಹೋಗಿ ಬಂದಿರುವ ಎಸ್.ಡಿ.ಆರ್.ಎಫ್. ತಂಡ ಹಾಗೂ ಮುಳುಗುತಜ್ಞರು ಇದೀಗ ಬಾಲಕಿ ಬಿದ್ದ ಜಾಗದಿಂದ 15 ಕಿ.ಮೀ. ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…