ಚಿಕ್ಕಮಗಳೂರಿನ ಹಿಟ್ & ರನ್ ಕೇಸ್ ಬಗ್ಗೆ ಕಾಮಿಡಿ ನಟ ಚಂದ್ರಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗಿಚ್ಚಿ ಗಿಲಿ ಗಿಲಿʼ ವಿನ್ನರ್ ಚಂದ್ರಪ್ರಭಾ ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಬೈಕ್ನಲ್ಲಿದ್ದ ಯುವಕ ಮಾಲ್ತೇಶ್ಗೆ ಗುದ್ದಿ ನಟ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು.
ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ ಎಂದು ಹೇಳಲಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…