ಚಿಕ್ಕಮಗಳೂರಿನ ಹಿಟ್ & ರನ್ ಕೇಸ್ ಬಗ್ಗೆ ಕಾಮಿಡಿ ನಟ ಚಂದ್ರಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗಿಚ್ಚಿ ಗಿಲಿ ಗಿಲಿʼ ವಿನ್ನರ್ ಚಂದ್ರಪ್ರಭಾ ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಬೈಕ್ನಲ್ಲಿದ್ದ ಯುವಕ ಮಾಲ್ತೇಶ್ಗೆ ಗುದ್ದಿ ನಟ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು.
ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ ಎಂದು ಹೇಳಲಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…