ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ ನಡೆದಿದೆ.
9ನೇ ತಗರತಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ್ (15) ಮೃತ ವಿದ್ಯಾರ್ಥಿ. ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಲೆಯ 3ನೇ ಮಹಡಿಯಲ್ಲಿದ್ದ ಹಾಸ್ಟೆಲ್ನ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ಸೀರೆಯಿಂದ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾನೆ.
ಕಳೆದ ರಾತ್ರಿ ಊಟ ಮಾಡಿ ಸ್ನೇಹತರ ಜೊತೆಯೇ ಮಲಗಿದ್ದ ಶ್ರೀನಿವಾಸ್ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮಲಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ಸರ್ಕಾರಿ ನೌಕರರಾಗಿದ್ದು, ಕೊಪ್ಪ ತಾಲೂಕಿನಲ್ಲೇ ಕೆಲಸ ಮಾಡುತ್ತಿದ್ದರು. ಶಾಲೆ ಮನೆಯಿಂದ ತುಸು ದೂರದಲ್ಲೇ ಇತ್ತು. ಮೃತ ಬಾಲಕ ನಿತ್ಯ ಓಡಾಕೊಂಡಿದ್ದನು. ಕಳೆದ ಒಂದು ತಿಂಗಳ ಹಿಂದೆ ಮೃತ ಶ್ರೀನಿವಾಸ್ ತಂದೆಗೆ ಕೊಪ್ಪದಿಂದ ಅಜ್ಜಂಪುರಕ್ಕೆ ವರ್ಗಾವಣೆಯಾಗಿತ್ತು. ಹಾಗಾಗಿ, ಶ್ರೀನಿವಾಸ್ನನ್ನ ಹಾಸ್ಟೆಲ್ಗೆ ಸೇರಿಸಿದ್ದರು.
ಒಂದು ತಿಂಗಳಿನಿಂದ ಶಾಲೆಯ ಹಾಸ್ಟೆಲ್ನಲ್ಲಿದ್ದ ಶ್ರೀನಿವಾಸ್ ಮಂಗಳವಾರ ಬೆಳಗ್ಗಿನ ಜಾವ ಹಾಸ್ಟೆಲ್ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…