Featured

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ – vishwanews24

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ 14 ತಿಂಗಳಿಂದ ಇದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಮುರುಘಾ ಶ್ರೀ ಅವರಿಗೆ ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.

ಇನ್ನು ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾಗಿದ್ದಾರೆ.

ಷರತ್ತು ವಿಧಿಸಿದ ಹೈಕೋರ್ಟ್
ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

18 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

51 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago