Featured

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ – vishwanews24

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ 14 ತಿಂಗಳಿಂದ ಇದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಮುರುಘಾ ಶ್ರೀ ಅವರಿಗೆ ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.

ಇನ್ನು ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾಗಿದ್ದಾರೆ.

ಷರತ್ತು ವಿಧಿಸಿದ ಹೈಕೋರ್ಟ್
ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Vishwa News 24

Recent Posts

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

14 minutes ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

24 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

2 hours ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago