ಚಿತ್ರದುರ್ಗ : ಗಂಡನನ್ನ ಬಿಟ್ಟು ಖಾದರ್ನನ್ನು ಪ್ರೀತಿಸಿ ಮದುವೆಯಾಗಿದ್ದಳು ಉಮಾ. ಆದರೆ ಮುಂದೆ ಪ್ರತಿನಿತ್ಯ ಚಿತ್ರಹಿಂಸೆ. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಕೆಯನ್ನ ಪೀಡಿಸುತ್ತಿದ್ದ ಅಬ್ದುಲ್ ಖಾದರ್. ಈ ಪ್ರಕರಣವು ಲವ್ ಜಿಹಾದ್ ಎನ್ನುವ ಆರೋಪ ಕೇಳಿಬಂದಿದೆ.
ಚಿತ್ರದುರ್ಗ ನಗರದ ನೆಹರು ಬಡಾವಣೆಯಲ್ಲಿ ವಾಸವಿರುವ ಶಿವಮೊಗ್ಗ ಮೂಲದ ಉಮಾ ಮತ್ತು ಚಿತ್ರದುರ್ಗದ ಅಬ್ದುಲ್ ಖಾದರ್ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವಾಗ ಪರಿಚಯವಾಗಿದ್ದರು. ಪರಿಚಯ ಪ್ರೀತಿಗೆ ತಿರುಗಿ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದರು. ವಿವಾಹಿತೆ ಆಗಿದ್ದ ಉಮಾ ಮೊದಲ ಗಂಡನಿಂದ ವಿಚ್ಛೇದನ ಪಡೆದ ಬಳಿಕ ಖಾದರ್ ಉಮಾಳನ್ನು ಮದುವೆ ಆಗಿದ್ದಳು.
ಮದುವೆಯಾಗಿ ವರ್ಷದ ಬಳಿಕ ಉಮಾಗೆ ಅನಾರೋಗ್ಯದಿಂದ ಎರಡು ಕಾಲುಗಳು ನಿಷ್ಕ್ರಿಯಗೊಂಡು ಹಾಸಿಗೆ ಹಿಡಿದಿದ್ದರು. ಈ ಮಧ್ಯೆ ಕಳೆದ ನಾಲ್ಕು ತಿಂಗಳಿಂದ ಅಬ್ದುಲ್ ಖಾದರ್ ಉಮಾಗೆ ಕಿರುಕುಳ ನೀಡುತ್ತಾ ಧರ್ಮ ನಿಂದನೆ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಲ್ಲೆ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಬ್ದುಲ್ ಖಾದರ್ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸಿಗೆ ಹಿಡಿದ ಉಮಾಳಿಗೆ ಪತಿ ಖಾದರ್ ಉಸಿರುಗಟ್ಟಿಸಿ ಹತ್ಯೆ ಮಾಡುವುದಾಗಿ ಬೆದರಿಸುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಕಳೆದ 6-7ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಉಮಾಳಿಗೆ ಖಾದರ್ ಚಿತ್ರ ವಿಚಿತ್ರವಾಗಿ ಕಿರುಕುಳ ನೀಡುತ್ತಿದ್ದು, ನ.16ರ ಸಂಜೆ ಕುಡಿದು ಬಂದು ಪತ್ನಿಯ ಗುಪ್ತಾಂಗಕ್ಕೆ ಕಾಲಿನಿಂದ ಜಾಡಿಸಿ ಒದ್ದಿದ್ದಾನೆ. ಈ ವೇಳೆ ಪೊಲೀಸ್ ಸ್ಟೇಶನ್ಗೆ ದೂರು ನೀಡುವುದಾಗಿ ಉಮಾ ಹೇಳಿದಾಗ ಮತ್ತಷ್ಟು ತೀವ್ರವಾಗಿ ಹಲ್ಲೆ ನಡೆಸಿದ್ದನಂತೆ. ಉಮಾ ತನ್ನ ದೂರದ ಸಂಬಂಧಿ ವಿಶ್ವನಾಥ್ ಎಂಬುವವರಿಗೆ ನಡೆದ ವಿಚಾರವನ್ನೆಲ್ಲ ಹೇಳಿ, ಅವರ ಮೂಲಕ ಪೊಲೀಸರ ನೆರವು ಪಡೆದಿದ್ದಾರೆ. ಗಂಭೀರ ಗಾಯಗೊಂಡ ಉಮಾರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೈಹಿಕ, ಮಾನಸಿಕ ಹಿಂಸೆ, ಜಾತಿ ನಿಂದನೆ, ಮತಾಂತರ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಹಿಂದೆ ಲವ್ ಜಿಹಾದ್ ಸಂಚಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…