ರಾಮನಗರ:ಲಾರಿ ಚಾಲಕನ ವೇಗ ಹಾಗೂ ಅಜಾಗರೂಕತೆಯಿಂದ ಚಿತ್ರದುರ್ಗದಲ್ಲಿ ಬಸ್ ಅಪಘಾತ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಚಿತ್ರದುರ್ಗ ಬಸ್ ದುರಂತದ ಕುರಿತು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್ಗೆ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಡಿವೈಡರ್ ದಾಟಿ ಬಂದು ಬಸ್ನ ಡೀಸೆಲ್ ಟ್ಯಾಂಕ್ಗೆ ಲಾರಿ ಗುದ್ದಿದೆ.
ಸ್ಥಳಕ್ಕೆ ಸಾರಿಗೆ ಇಲಾಖೆ ಕಮಿಷನರ್ ಹೋಗಿದ್ದು, ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದರು.
ಮೊನ್ನೆ ಒಂದು ಬಸ್ ದುರಂತ ಆದಾಗಾ ಈ ಬಗ್ಗೆ ಸಾರಿಗೆ ಇಲಾಖೆ ಸಾಕಷ್ಟು ಕ್ರಮವಹಿಸಿದೆ. ಬಸ್ನಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ಎಚ್ಚರ ವಹಿಸಿದ್ದೇವೆ. 2013ರಲ್ಲೂ ನಾನು ಸಾರಿಗೆ ಸಚಿವನಾಗಿದ್ದಾಗ ಒಂದು ಬಸ್ ಅಗ್ನಿ ದುರಂತ ಆಗಿತ್ತು. ಆಗಲೂ ಎಲ್ಲಾ ಬಸ್ಗಳಿಗೆ ಕಡ್ಡಾಯ ಎಮರ್ಜೆನ್ಸಿ ಡೋರ್ ಮಾಡಿದ್ದೇವೆ. ಈಗಲೂ ಎಲ್ಲಾ ಬಸ್ಗಳಲ್ಲೂ ಎಮರ್ಜೆನ್ಸಿ ಡೋರ್ ಕಡ್ಡಾಯ ಮಾಡಲಾಗಿದೆ. ಈ ಅವಘಡ ಚಾಲಕರ ಅಜಾಗರೂಕತೆಯಿಂದ ಆಗಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…