Featured

ಚಿತ್ರದುರ್ಗ ಭೀಕರ ರಸ್ತೆ ಅಫಘಾತ : ‘ಮಗಳು ಜಾನಕಿ’ ಖ್ಯಾತಿಯ ನಟಿ ಶೋಭಾ ಸಾವು -Vishwanews24

ಚಿತ್ರದುರ್ಗ: ಖ್ಯಾತ ಕಿರುತೆರೆ ನಟಿ ಶೋಭಾ ಎಮ್.ವಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭಾ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಒಟ್ಟು ಎಂಟು ಜನ ಪ್ರಯಾಣಿಸುತ್ತಿದ್ದು ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಬದಾಮಿ ಬನಶಂಕರಿ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸಹಜ ಮತ್ತು ನೈಜ ಅಭಿನಯದ ಮೂಲಕವೆ ವೀಕ್ಷಕರ ಮನಗೆದ್ದಿದ್ದ ಶೋಭಾ ಧಾರಾವಾಹಿಯ ಪಾತ್ರಧಾರಿಯಂತೆ, ನಿಜ ಜೀವನದಲ್ಲೂ ಅತ್ಯಂತ ಸಜ್ಜನ ಮತ್ತು ಸೌಮ್ಯ ಸ್ವಭಾವದವರಾಗಿದ್ದರು. ಮಗಳು ಜಾನಕಿ ಧಾರಾವಾಹಿ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ವೀಕ್ಷಕರಿಗೆ ಮನರಂಜನೆ ನೀಡಿದ್ದಾರೆ ಶೋಭಾ.

ಶೋಭಾ ಅವರ ನಿಧನಕ್ಕೆ ಮಗಳು ಜಾನಕಿ ಧಾರಾವಾಹಿ ತಂಡ ಮತ್ತು ಅಭಿಮಾನಿ ಬಳಗ ಸಂತಾಪ ಸೂಚಿಸಿದೆ. ಶೋಭಾ ಅವರ ಅಗಲಿಗೆ ತಂಡಕ್ಕೆ ದೊಡ್ಡ ನಷ್ಟ ಎಂದು ಧಾರಾವಾಹಿ ತಂಡ ಹೇಳಿಕೊಂಡಿದೆ. ಅಲ್ಲದೆ ಈ ಧಾರಾವಾಹಿಯ ಅತೀ ದೊಡ್ಡ ಫೇಸ್ ಬುಕ್ ಗ್ರೂಪ್ ನವರು ಕೂಡ ಶುಭಾ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಮಂಗಳಕ್ಕ ಆಗಿ ಧಾರಾವಾಹಿಯಲ್ಲಿ ಎಲ್ಲರ ಅಚ್ಚುಮೆಚ್ಚಾಗಿದ್ದರು ಶೋಭಾ. ಮಗಳು ಜಾನಕಿ ಧಾರಾವಾಹಿ ನಿರ್ದೇಶಕ ಟಿ ಎನ್ ಸೀತಾರಾಮ್ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿದೆ.

ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago