Featured

ಚಿತ್ರದುರ್ಗ ಭೀಕರ ರಸ್ತೆ ಅಫಘಾತ : ‘ಮಗಳು ಜಾನಕಿ’ ಖ್ಯಾತಿಯ ನಟಿ ಶೋಭಾ ಸಾವು -Vishwanews24

ಚಿತ್ರದುರ್ಗ: ಖ್ಯಾತ ಕಿರುತೆರೆ ನಟಿ ಶೋಭಾ ಎಮ್.ವಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭಾ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಒಟ್ಟು ಎಂಟು ಜನ ಪ್ರಯಾಣಿಸುತ್ತಿದ್ದು ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಬದಾಮಿ ಬನಶಂಕರಿ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸಹಜ ಮತ್ತು ನೈಜ ಅಭಿನಯದ ಮೂಲಕವೆ ವೀಕ್ಷಕರ ಮನಗೆದ್ದಿದ್ದ ಶೋಭಾ ಧಾರಾವಾಹಿಯ ಪಾತ್ರಧಾರಿಯಂತೆ, ನಿಜ ಜೀವನದಲ್ಲೂ ಅತ್ಯಂತ ಸಜ್ಜನ ಮತ್ತು ಸೌಮ್ಯ ಸ್ವಭಾವದವರಾಗಿದ್ದರು. ಮಗಳು ಜಾನಕಿ ಧಾರಾವಾಹಿ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ವೀಕ್ಷಕರಿಗೆ ಮನರಂಜನೆ ನೀಡಿದ್ದಾರೆ ಶೋಭಾ.

ಶೋಭಾ ಅವರ ನಿಧನಕ್ಕೆ ಮಗಳು ಜಾನಕಿ ಧಾರಾವಾಹಿ ತಂಡ ಮತ್ತು ಅಭಿಮಾನಿ ಬಳಗ ಸಂತಾಪ ಸೂಚಿಸಿದೆ. ಶೋಭಾ ಅವರ ಅಗಲಿಗೆ ತಂಡಕ್ಕೆ ದೊಡ್ಡ ನಷ್ಟ ಎಂದು ಧಾರಾವಾಹಿ ತಂಡ ಹೇಳಿಕೊಂಡಿದೆ. ಅಲ್ಲದೆ ಈ ಧಾರಾವಾಹಿಯ ಅತೀ ದೊಡ್ಡ ಫೇಸ್ ಬುಕ್ ಗ್ರೂಪ್ ನವರು ಕೂಡ ಶುಭಾ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಮಂಗಳಕ್ಕ ಆಗಿ ಧಾರಾವಾಹಿಯಲ್ಲಿ ಎಲ್ಲರ ಅಚ್ಚುಮೆಚ್ಚಾಗಿದ್ದರು ಶೋಭಾ. ಮಗಳು ಜಾನಕಿ ಧಾರಾವಾಹಿ ನಿರ್ದೇಶಕ ಟಿ ಎನ್ ಸೀತಾರಾಮ್ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿದೆ.

ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

42 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

50 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago