ಚಿತ್ರದುರ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ : ಕುಂದಾಪುರದ ಒಂದೇ ಕುಟುಂಬದ ಮೂವರ ಸಾವು – VIshwanews24

Featured, ರಾಜ್ಯ ನ್ಯೂಸ್

ಚಿತ್ರದುರ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ : ಕುಂದಾಪುರದ ಒಂದೇ ಕುಟುಂಬದ ಮೂವರ ಸಾವು – VIshwanews24

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಗೀತಾ (32), ತಾಯಿ ಶಾರದಾ (60) ಹಾಗೂ ಮಗಳು ಧ್ರುತಿ (5) ಮೃತಪಟ್ಟವರು.

ನಾಗೇಶ (65), ದಯಾನಂದ (66), ಸುಧೀಂದ್ರ (35) ಗಾಯಗೊಂಡಿದ್ದು, ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ಸಂಭವಿಸಿರಬಹುದು ಎಂದು ಹೊಸದುರ್ಗ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಸದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,.

 

Leave a Reply