ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ.
ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಶಾಂತ್ ಹಟ್ಟಿ (36) ಸಾವನ್ನಪ್ಪಿದವರು. ಮೃತರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ಹೊರಟಿದ್ದ ಈಚರ್ ಲಾರಿಯೊಂದರ ಟೈರ್ ಸಿಡಿದು ಪಲ್ಟಿಯಾಗಿದೆ. ಆಗ ಲಾರಿಯ ಹಿಂಬದಿ ಬರುತ್ತಿದ್ದ ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡು ಹಿರಿಯೂರು ತಾಲೂಕು ಆಸ್ಪತ್ರೆ ಸೇರಿದ್ದಾರೆ.
ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ರೈತರು ಕಷ್ಟಪಟ್ಟು ಬೆಳೆದ ಈರುಳ್ಳಿಯೆಲ್ಲಾ ರಸ್ತೆ ಪಾಲಾಗಿವೆ. ಒಂದರ ಹಿಂದೆ ಒಂದು ಲಾರಿ ಡಿಕ್ಕಿಯಾಗಿ ಎರಡು ಲಾರಿಗಳು ಹಾಗೂ ಕಾರು ಪಲ್ಟಿಯಾಗಿವೆ. ಆದರೆ ಆ ವಾಹನಗಳಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಭೀಕರ ಅಪಘಾತದ ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…