Featured

ಚಿತ್ರದುರ್ಗ: ಹಿರಿಯೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು – Vishwanews24

ಚಿತ್ರದುರ್ಗ: ಹಿರಿಯೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು – Vishwanews24

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ.

ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಶಾಂತ್ ಹಟ್ಟಿ (36) ಸಾವನ್ನಪ್ಪಿದವರು. ಮೃತರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ಹೊರಟಿದ್ದ ಈಚರ್ ಲಾರಿಯೊಂದರ ಟೈರ್ ಸಿಡಿದು ಪಲ್ಟಿಯಾಗಿದೆ. ಆಗ ಲಾರಿಯ ಹಿಂಬದಿ ಬರುತ್ತಿದ್ದ ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡು ಹಿರಿಯೂರು ತಾಲೂಕು ಆಸ್ಪತ್ರೆ ಸೇರಿದ್ದಾರೆ.

ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ರೈತರು ಕಷ್ಟಪಟ್ಟು ಬೆಳೆದ ಈರುಳ್ಳಿಯೆಲ್ಲಾ ರಸ್ತೆ ಪಾಲಾಗಿವೆ. ಒಂದರ ಹಿಂದೆ ಒಂದು ಲಾರಿ ಡಿಕ್ಕಿಯಾಗಿ ಎರಡು ಲಾರಿಗಳು ಹಾಗೂ ಕಾರು ಪಲ್ಟಿಯಾಗಿವೆ. ಆದರೆ ಆ ವಾಹನಗಳಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಭೀಕರ ಅಪಘಾತದ ಸ್ಥಳಕ್ಕೆ ಎಸ್‍ಪಿ ಜಿ ರಾಧಿಕಾ, ಡಿವೈಎಸ್‍ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago