Featured

ಚಿತ್ರನಟ ಶಿವರಂಜನ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ  : ಅಪಾಯದಿಂದ ಪಾರು – Vishwanews24

ಚಿತ್ರನಟ ಶಿವರಂಜನ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ  : ಅಪಾಯದಿಂದ ಪಾರು

ಬೆಳಗಾವಿ: ಬೈಕ್‌ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ಗುಂಡು ತಾಗದೆ ಶಿವರಂಜನ್ ಅಪಾಯದಿಂದ ಪಾರಾಗಿದ್ದಾರೆ.

ಬೈಲಹೊಂಗಲ ಪಟ್ಟಣದ ಹನುಮಂತ ದೇವಸ್ಥಾನದ ಬಳಿ ಶಿವರಂಜನ್ ಬೋಳಣ್ಣವರ ಅವರ ಹಳೆಯ ಮನೆ ಇದ್ದು, ಈ ಮನೆ ಬಳಿ ಘಟನೆ ನಡದಿದೆ. ಸುಮಾರು ಮೂರ್‍ನಾಲ್ಕು ಸುತ್ತು ಫೈರಿಂಗ್ ನಡೆಸಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ. ಆದರೆ ಯಾವುದೇ ಗುಂಡು ತಗುಲದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಸಂಪೂರ್ಣ ಚಿತ್ರಣ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಹೋದರ ಸಂಬಂಧಿಯೇ ಇದನ್ನು ಮಾಡಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಶಿವರಂಜನ್ ಅವರನ್ನೂ ಪೊಲೀಸರು ಇದೀಗ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಬೈಲಹೊಂಗಲ ಪಟ್ಟಣದ ಸುತ್ತ ಪೊಲೀಸರು ನಾಕಾಬಂಧಿ ಹಾಕಿದ್ದು, ಸಂಶಯಾಸ್ಪದ ವಾಹನಗಳನ್ನು ತಪಾಸಣೆ ನಡೆಸಿಯೇ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಲಿಂಗ ನಂದಗಾಂವಿ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago