ಉಡುಪಿ: ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಚಿತ್ರನಟ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಉಡುಪಿಯಲ್ಲಿ ನೆರವೇರಿತು.
ಉಡುಪಿಯ ಅಂಬಲಪಾಡಿಯ ಮೂಲ ಮನೆಯಲ್ಲಿ ಅಂತಿಮ ವಿಧಿವಿಧಾನಗಳು ನಡೆದವು. ತುಳಸಿ ಕಟ್ಟೆ ಮುಂಭಾಗದಲ್ಲಿ ಅರ್ಚಕರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಹರೀಶ್ ಆಚಾರ್ಯ ಆಪ್ತರು ಕುಟುಂಬದವರು ಅಂತಿಮ ವಿಧಿ ವಿಧಾನದಲ್ಲಿ ಭಾಗಿಯಾದರು. ಬಳಿಕ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಹಿಂದು ರುದ್ರಭೂಮಿಗೆ ಕೊಂಡೊಯ್ಯಲಾಯಿತು. ನಟ ಹರೀಶ್ ರಾಯ್ ಮೃತದೇಹಕ್ಕೆ ಸಹೋದರ ಸತೀಶ್ ಹಾಗೂ ಪುತ್ರರಾದ ರೋನೆತ್ ರಾಯ್, ರೋಷನ್ ರಾಯ್ ಅಗ್ನಿಸ್ಪರ್ಶ ಮಾಡಿದರು.
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನವಾದರು. ಸಹೋದರ ಸಹೋದರಿಯರು ಅಂತಿಮ ನಮನ ಸಲ್ಲಿಸಿದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…