ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ರಂಗ ಬಿಟ್ಟು ವ್ಯವಸಾಯ ಮಾಡಲು ತೀರ್ಮಾನಿಸಿದ್ದು, `ನಟಭಯಂಕರ’ ನನ್ನ ಕೊನೆಯ ಸಿನಿಮಾ. ಮುಂದೇ ಸ್ವಗ್ರಾಮಕ್ಕೆ ತೆರಳಿ ವ್ಯವಸಾಯ ಮಾಡಲು ನಿರ್ಧಾರಿಸಿರುವುದ್ದಾಗಿ ತಿಳಿಸಿದ್ದಾರೆ.
ಕನ್ನಡದ ಬಿಗ್ ಬಾಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಹಲವಾರು ಅಭಿಮಾನಿಗಳನ್ನು ಗಳಿಸಿದ್ದ ಒಳ್ಳೆ ಹುಡುಗ ಪ್ರಥಮ್ ಆ ಬಳಿಕ ಕೆಲವು ಸಿನಿಮಾಗಳಲ್ಲೂ ನಟಿಸಿದ್ದರು. ಈ ನಡುವೆ ಹಲವಾರು ವಿವಾದಗಳನ್ನು ಕೂಡಾ ಮೈಗೆಳೆದುಕೊಂಡಿದ್ದರು. ಇದೀಗ ಇನ್ನು ಮುಂದೆ ಚಿತ್ರರಂಗದ ಕಡೆ ತಲೆ ಹಾಕುವುದಿಲ್ಲ, ನಾನು ಊರಲ್ಲಿ ಕೃಷಿ ಮಾಡಿಕೊಂಡಿರುತ್ತೇನೆ ಎಂದು ಪ್ರಥಮ್ ಹೇಳಿದ್ದಾರೆ.
ಜೀವನದಲ್ಲಿ ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಗೆದ್ದಿದ್ದೇನೆ. ಸಿನಿಮಾದಲ್ಲೂ ನಟಿಸಿದ್ದೇನೆ. ಅಪಾರ ಅಭಿಮಾನಿಗಳು ಇದ್ದಾರೆ. ಆದರೆ ಒತ್ತಡದ ಬದುಕು ನನಗೆ ಸೆಟ್ ಆಗಲ್ಲ ಎಂದು ತಿಳಿಸಿದ್ದಾರೆ. ಮಂದಿನ ದಿನದಲ್ಲಿ ಯಾವುದೇ ಸಿನಿಮಾ ಮಾಡದಿರುವಂತೆ ನಿರ್ಧರಿಸಿದ್ದೇನೆ. ನಮ್ಮೂರೇ ನನಗೆ ಸರಿ. ಇಲ್ಲಿ ನಾನಿರಲ್ಲ. ಸ್ವಂತ ಊರಿನಲ್ಲಿ ತೆಂಗಿನ ಸಸಿ ನೆಟ್ಟು ತೋಟ ಮಾಡುತ್ತೇನೆ. ಇಲ್ಲಿಗಿಂತ ಊರಿನಲ್ಲಿ ಕುರಿ ಸಾಕಣೆ, ಕೃಷಿ ಕೆಲಸವೇ ಮೇಲು ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…