ಬೆಂಗಳೂರು: ಒಳ್ಳೆ ಹುಡುಗ ಪ್ರಥಮ್ ಸಿನಿಮಾ ರಂಗ ಬಿಟ್ಟು ವ್ಯವಸಾಯ ಮಾಡಲು ತೀರ್ಮಾನಿಸಿದ್ದು, `ನಟಭಯಂಕರ’ ನನ್ನ ಕೊನೆಯ ಸಿನಿಮಾ. ಮುಂದೇ ಸ್ವಗ್ರಾಮಕ್ಕೆ ತೆರಳಿ ವ್ಯವಸಾಯ ಮಾಡಲು ನಿರ್ಧಾರಿಸಿರುವುದ್ದಾಗಿ ತಿಳಿಸಿದ್ದಾರೆ.
ಕನ್ನಡದ ಬಿಗ್ ಬಾಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಹಲವಾರು ಅಭಿಮಾನಿಗಳನ್ನು ಗಳಿಸಿದ್ದ ಒಳ್ಳೆ ಹುಡುಗ ಪ್ರಥಮ್ ಆ ಬಳಿಕ ಕೆಲವು ಸಿನಿಮಾಗಳಲ್ಲೂ ನಟಿಸಿದ್ದರು. ಈ ನಡುವೆ ಹಲವಾರು ವಿವಾದಗಳನ್ನು ಕೂಡಾ ಮೈಗೆಳೆದುಕೊಂಡಿದ್ದರು. ಇದೀಗ ಇನ್ನು ಮುಂದೆ ಚಿತ್ರರಂಗದ ಕಡೆ ತಲೆ ಹಾಕುವುದಿಲ್ಲ, ನಾನು ಊರಲ್ಲಿ ಕೃಷಿ ಮಾಡಿಕೊಂಡಿರುತ್ತೇನೆ ಎಂದು ಪ್ರಥಮ್ ಹೇಳಿದ್ದಾರೆ.
ಜೀವನದಲ್ಲಿ ನಾನು ಅಂದುಕೊಂಡಿದ್ದನ್ನು ಸಾಧಿಸಿದ್ದೇನೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಗೆದ್ದಿದ್ದೇನೆ. ಸಿನಿಮಾದಲ್ಲೂ ನಟಿಸಿದ್ದೇನೆ. ಅಪಾರ ಅಭಿಮಾನಿಗಳು ಇದ್ದಾರೆ. ಆದರೆ ಒತ್ತಡದ ಬದುಕು ನನಗೆ ಸೆಟ್ ಆಗಲ್ಲ ಎಂದು ತಿಳಿಸಿದ್ದಾರೆ. ಮಂದಿನ ದಿನದಲ್ಲಿ ಯಾವುದೇ ಸಿನಿಮಾ ಮಾಡದಿರುವಂತೆ ನಿರ್ಧರಿಸಿದ್ದೇನೆ. ನಮ್ಮೂರೇ ನನಗೆ ಸರಿ. ಇಲ್ಲಿ ನಾನಿರಲ್ಲ. ಸ್ವಂತ ಊರಿನಲ್ಲಿ ತೆಂಗಿನ ಸಸಿ ನೆಟ್ಟು ತೋಟ ಮಾಡುತ್ತೇನೆ. ಇಲ್ಲಿಗಿಂತ ಊರಿನಲ್ಲಿ ಕುರಿ ಸಾಕಣೆ, ಕೃಷಿ ಕೆಲಸವೇ ಮೇಲು ಎಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…