Featured

ಚಿತ್ರೀಕರಣದ ವೇಳೆ ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ : ಪ್ರಾಣಾಪಾಯದಿಂದ ಪಾರು -Vishwanews24

ಚಿತ್ರೀಕರಣದ ವೇಳೆ ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ : ಪ್ರಾಣಾಪಾಯದಿಂದ ಪಾರು -Vishwanews24

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ಇಂದು ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

7 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

18 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

44 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

48 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

54 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

1 hour ago