ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.
ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್ ಸಾವನ್ನಪ್ಪಿದ ಹಿನ್ನೆಲೆ ಕನ್ನಡ ಚಿತ್ರರಂಗದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ಉತ್ತರ ಹೊರವಲಯದ ವಿಆರ್ಎಲ್ ಅರೆನಾ ಬಳಿ ಸಂಭವಿಸಿದ ಘಟನೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಶಿವರಾಜ್ (30) ಮೃತಪಟ್ಟಿದ್ದಾರೆ.
ಎರಡು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನದಲ್ಲಿ ಮುಂಗಾರು ಮಳೆ, ಗಾಳಿಪಟ ದಂತಹ ಹಿಟ್ ಸಿನಿಮಾಗಳನ್ನು ನೀಡಿದ್ದ ಯೋಗರಾಜ್ ಭಟ್ ಅವರನ್ನು ಮಾದನಾಯಕನಹಳ್ಳಿ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಆರೋಪಿ ಸಂಖ್ಯೆ 3 ಎಂದು ನಮೂದಿಸಲಾಗಿದೆ. ಮ್ಯಾನೇಜರ್ ಸುರೇಶ್ ಅವರನ್ನು ಆರೋಪಿ ಸಂಖ್ಯೆ 1 ಎಂದು ಹೆಸರು ದಾಖಲಾಗಿಸಲಾಗಿದೆ.
ಚಿತ್ರದ ಚಿತ್ರೀಕರಣದ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…