ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಪ್ರಕರಣ ದಾಖಲಿಸಲಾಗಿದೆ. ನನ್ನ ಮೇಲೆ ಸಿಬಿಐ ನಾಲ್ಕು ಬಾರಿ ದಾಳಿ ಮಾಡಿದೆ. ಈವರೆಗೆ ಯಾರ ಮೇಲೂ ಇಷ್ಟು ದಾಳಿ ನಡೆದಿಲ್ಲ. ಇಪ್ಪತ್ತು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ಪ್ರತಿಬಾರಿ ಹತ್ತು ಗಂಟೆ ವಿಚಾರಣೆ ನಡೆಸುತ್ತಾರೆ ಎಂದು ದೂರಿದರು.
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬಂಧನ ಮಾಡಿರುವವರ ವಿರುದ್ಧ ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.