ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ ನಿರಾಕರಣೆ  : ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್ – vishwanews24

Featured, ರಾಜ್ಯ ನ್ಯೂಸ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ ನಿರಾಕರಣೆ  : ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ ಉನ್ನತ ಮಟ್ಟದ ಸಮಿತಿಯಿಂದ ಅನುಮತಿ ನಿರಾಕರಿಸಲಾಯ್ತು ಎಂದಿದ್ದಾರೆ.

ಮುಂಬಯಿ ಉಳಿಸಲು ಒಂದಾಗುತ್ತಿದ್ದೇವೆ : ಬಿಎಂಸಿ ಚುನಾವಣೆಗೆ ಮೈತ್ರಿ ಘೋಷಿಸಿದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ – vishwanews24

ಕಾಲ್ತುಳಿತ ಘಟನೆ ಆದ ಮೇಲೆ ನ್ಯಾ.ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿಲಾಗಿತ್ತು.‌ ಅವರು ಕೊಟ್ಟ 17 ಶಿಫಾರಸ್ಸುಗಳನ್ನು ಕೆಎಸ್‌ಸಿಎ ಅವರಿಗೆ ನೀಡಿದ್ದೆವು, ಅದಕ್ಕೆ ಅವರು ಸ್ಪಂದಿಸಬೇಕಿತ್ತು. ಆದರೆ ಅವರು ಇದುವರೆಗೂ ಏನೂ ಮಾಡಿದಂತೆ ಕಂಡುಬಂದಿಲ್ಲ. ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳಿರೋ ಸಮಿತಿಯವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಒಂದೂ ಶಿಫಾರಸ್ಸು ಕೂಡಾ ಅಲ್ಲಿ ಪೂರ್ತಿ ಮಾಡಿರಲಿಲ್ಲ. ಹಾಗಾಗಿ ಅನುಮತಿ ಕೊಡಲು ಸಾಧ್ಯವಾಗಿಲ್ಲ ಅಂತ ಸಮಿತಿ ನಿರ್ಧಾರ ಕೈಗೊಂಡಿದೆ. ನ್ಯಾ.ಕುನ್ಹಾ ಶಿಫಾರಸ್ಸುಗಳಂತೆ ಅವರು ಕ್ರಮ ಕೈಗೊಂಡರೆ ಅನುಮತಿ ಸಿಗಲಿದೆ ಅಂತ ತಿಳಿಸಿದ್ದಾರೆ.

Leave a Reply