ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ ಉನ್ನತ ಮಟ್ಟದ ಸಮಿತಿಯಿಂದ ಅನುಮತಿ ನಿರಾಕರಿಸಲಾಯ್ತು ಎಂದಿದ್ದಾರೆ.
ಕಾಲ್ತುಳಿತ ಘಟನೆ ಆದ ಮೇಲೆ ನ್ಯಾ.ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿಲಾಗಿತ್ತು. ಅವರು ಕೊಟ್ಟ 17 ಶಿಫಾರಸ್ಸುಗಳನ್ನು ಕೆಎಸ್ಸಿಎ ಅವರಿಗೆ ನೀಡಿದ್ದೆವು, ಅದಕ್ಕೆ ಅವರು ಸ್ಪಂದಿಸಬೇಕಿತ್ತು. ಆದರೆ ಅವರು ಇದುವರೆಗೂ ಏನೂ ಮಾಡಿದಂತೆ ಕಂಡುಬಂದಿಲ್ಲ. ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳಿರೋ ಸಮಿತಿಯವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಒಂದೂ ಶಿಫಾರಸ್ಸು ಕೂಡಾ ಅಲ್ಲಿ ಪೂರ್ತಿ ಮಾಡಿರಲಿಲ್ಲ. ಹಾಗಾಗಿ ಅನುಮತಿ ಕೊಡಲು ಸಾಧ್ಯವಾಗಿಲ್ಲ ಅಂತ ಸಮಿತಿ ನಿರ್ಧಾರ ಕೈಗೊಂಡಿದೆ. ನ್ಯಾ.ಕುನ್ಹಾ ಶಿಫಾರಸ್ಸುಗಳಂತೆ ಅವರು ಕ್ರಮ ಕೈಗೊಂಡರೆ ಅನುಮತಿ ಸಿಗಲಿದೆ ಅಂತ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…