ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ ಉನ್ನತ ಮಟ್ಟದ ಸಮಿತಿಯಿಂದ ಅನುಮತಿ ನಿರಾಕರಿಸಲಾಯ್ತು ಎಂದಿದ್ದಾರೆ.
ಕಾಲ್ತುಳಿತ ಘಟನೆ ಆದ ಮೇಲೆ ನ್ಯಾ.ಕುನ್ಹಾ ನೇತೃತ್ವದಲ್ಲಿ ಆಯೋಗ ರಚಿಸಿಲಾಗಿತ್ತು. ಅವರು ಕೊಟ್ಟ 17 ಶಿಫಾರಸ್ಸುಗಳನ್ನು ಕೆಎಸ್ಸಿಎ ಅವರಿಗೆ ನೀಡಿದ್ದೆವು, ಅದಕ್ಕೆ ಅವರು ಸ್ಪಂದಿಸಬೇಕಿತ್ತು. ಆದರೆ ಅವರು ಇದುವರೆಗೂ ಏನೂ ಮಾಡಿದಂತೆ ಕಂಡುಬಂದಿಲ್ಲ. ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳಿರೋ ಸಮಿತಿಯವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಒಂದೂ ಶಿಫಾರಸ್ಸು ಕೂಡಾ ಅಲ್ಲಿ ಪೂರ್ತಿ ಮಾಡಿರಲಿಲ್ಲ. ಹಾಗಾಗಿ ಅನುಮತಿ ಕೊಡಲು ಸಾಧ್ಯವಾಗಿಲ್ಲ ಅಂತ ಸಮಿತಿ ನಿರ್ಧಾರ ಕೈಗೊಂಡಿದೆ. ನ್ಯಾ.ಕುನ್ಹಾ ಶಿಫಾರಸ್ಸುಗಳಂತೆ ಅವರು ಕ್ರಮ ಕೈಗೊಂಡರೆ ಅನುಮತಿ ಸಿಗಲಿದೆ ಅಂತ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…