ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡದ ಟ್ರೈಲರ್ನನ್ನು ಚಿರು ಮುದ್ದು ಮಗ ಜೂನಿಯರ್ ಚಿರು ಲಾಂಚ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುಟ್ಟದಾದ ಮುದ್ದು ಕೈಬೆರಳುಗಳಿಂದ ಅಪ್ಪನ ಸಿನಿಮಾದ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ನ ವೀಡಿಯೋ ಪ್ಲೇ ಮಾಡುತ್ತಿರುವ ವೀಡಿಯೋವನ್ನು ಮೇಘನಾರಾಜ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೊಗರು ಸಿನಿಮಾ ಬಿಡುಗಡೆಯಾಗಿರುವ ದಿನವೇ ಚಿರು ಅಭಿನಯದ ರಾಜಮಾರ್ತಾಂಡ ಟ್ರೈಲರ್ ಮುದ್ದಾದ ಮಗನಿಂದ ಬಿಡುಗಡೆಯಾಗಿರುವುದು ವಿಶೇಷವಾಗಿದೆ.
ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ : ಸಿದ್ದರಾಮಯ್ಯ -Vishwanews24
ರಾಜಾಮಾರ್ತಾಂಡ ಸಿನಿಮಾ ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾಗಿದೆ. ಚಿರು ಒಂದು ಪಾತ್ರವನ್ನು ಎಷ್ಟೊಂದು ಇಷ್ಟಪಟ್ಟು ಮಾಡುತ್ತಿದ್ದರು ಎನ್ನುವುದು ತಿಳಿದಿದೆ. ಈ ಸಿನಿಮಾವವನ್ನು ತಂಬಾ ಇಷ್ಟಪಟ್ಟು ಮಾಡಿದ್ದರು. ಈ ಸಿನಿಮಾ ಅವರ ಸಿನಿಮಾ ಜರ್ನಿಯಲ್ಲಿ ಅತ್ಯಂತ ವಿಶೇಷವಾಗಿದೆ. ಇಲ್ಲಿವರೆಗೂ ಮಾಡಿರುವ ಪಾತ್ರಗಳಿಗಿಂತ ಅತ್ಯಂತ ವಿಭಿನ್ನ ಮತ್ತು ವಿಶಿಷ್ಟವಾಗಿರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಪನಿಗೋಸ್ಕರ ಅಪ್ಪನಿಗಾಗಿ ಮತ್ತು ಸಿನಿಮಾತಂಡಕ್ಕಾಗಿ ಜೂನಿಯರ್ ಚಿರು ಟ್ರೈಲರ್ ಲಾಂಚ್ ಮಾಡುತ್ತಿದ್ದಾನೆ. ಈ ಸಿನಿಮಾ ತಂಡ ಕುಟುಂಬಕ್ಕೆ ಹತ್ತಿರವಾಗಿದೆ. ಚಿರು ನಟನೆ ಮಾಡಿದ್ದಾರೆ, ಧ್ರುವ ಸರ್ಜಾ ಧ್ವನಿಯನ್ನು ನೀಡಿದ್ದಾರೆ. ಮಗ ಟ್ರೈಲರ್ ಲಾಂಚ್ ಮಾಡಿದ್ದಾರೆ. ಸಿನಿಮಾಕ್ಕೆ ಶುಭಾಶಯಗಳು ಎಂದು ಹೇಳಿ ಮುದ್ದು ಮಗು ಟ್ರೈಲರ್ ರೀಲಿಸ್ ಮಾಡಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಫೆಬ್ರವರಿ 19ಕ್ಕೆ ರಾಜಮಾರ್ತಾಂಡ ಸಿನಿಮಾದ ಟ್ರೈಲರ್ ರಿಲೀಸ್ ಆಗುತ್ತದೆ. ಎಲ್ಲಾ ಅವನ ತಂದೆಗಾಗಿ. ಅಪ್ಪನ ಏಂಜಲ್, ರಾಜಮಾತಾರ್ಂಡ ಟ್ರೈಲರ್ ಅನ್ನು ನನ್ನ ಮಗ ನಾಳೆ ಬಿಡುಗಡೆ ಮಾಡಲಿದ್ದಾನೆ ಎಂದು ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದರು ಅದರಂತೆ ಇದೀಗ ಟ್ರೈಲರ್ ಬಿಡುಗಡೆಯಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…