ನವದೆಹಲಿ: ಚೀನಾದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣಗಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ.ಮಾರಕ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಇದೀಗ ದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್ಎಂಎಲ್) ಸೇರಿರುವ ಮೂರು ಮಂದಿಗೆ ಶಂಕಿತ ಕರೋನ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿವೆ. ಮೂವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ (ಎನ್ಸಿಡಿಸಿ) ಕಳುಹಿಸಲಾಗಿದೆ.ಭಾನುವಾರದವರೆಗೆ ದೇಶಕ್ಕೆ 137 ವಿಮಾನಗಳ ಮೂಲಕ 29707 ಪ್ರಯಾಣಿಕರು ಆಗಮಿಸಿದ್ದಾರೆ.
ಚೀನಾದಲ್ಲಿ ಕೊರೋನಾ ವೈರಸ್ಗೆ ಸಾವನ್ನಪ್ಪಿದವರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ 1,300 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇರಳವೊಂದರಲ್ಲಿ 100 ಮಂದಿಯನ್ನು ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ.
ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…