Featured

ಚೀನಾದ 59 ಆಯಪ್‌ ಮೇಲೆ ಶಾಶ್ವತ ನಿಷೇಧ ಹೇರಿದ ಮೋದಿ ಸರ್ಕಾರ -Vishwanews24

ಚೀನಾ ಮೂಲದ 59 ಆಯಪ್‌ ಮೇಲೆ ಶಾಶ್ವತ ನಿಷೇಧ ಹೇರಿದ ಮೋದಿ ಸರ್ಕಾರ -Vishwanews24

ನವ ದೆಹಲಿ : ಸಿಕ್ಕಿಂನ ನಕು ಲಾದಲ್ಲಿ ಚೀನಾದ ಸೈನಿಕರೊಂದಿಗಿನ ಸಂಘರ್ಷ ನಡೆದ ಬೆನ್ನಲ್ಲೆ ಜನಪ್ರಿಯ ಟಿಕ್ ಟಾಕ್ ಸೇರಿದಂತೆ 59 ಚೀನಾ ಮೂಲದ ಆಯಪ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶಾಶ್ವತ ನಿಷೇಧ ಹೇರಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಜನಪ್ರಿಯ ವಿಡಿಯೋ ಅಪ್ಲಿಕೇಶನ್ ಟಿಕ್ ಟಾಕ್ ಮತ್ತು ಇತರ 58 ಚೀನೀ ಅಪ್ಲಿಕೇಶನ್‌ಗಳಿಗೆ ಶಾಶ್ವತ ನಿಷೇಧ ಹೇರಲು ಹೊಸ ನೋಟಿಸ್ ನೀಡಿದೆ, ಕಳೆದ ವರ್ಷ ಜೂನ್‌ನಲ್ಲಿ ಈ ಸಂಬಂಧಿಸಿದಂತೆ ಸರ್ಕಾರ ನಿರ್ಬಂಧಗಳನ್ನು ವಿಧಿಸಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ.
ಮೊದಲ ಬಾರಿಗೆ ಚೀನಾ ಮೂಲದ ಬೈಟ್‌ ಡ್ಯಾನ್ಸ್‌ನ ಜನಪ್ರಿಯ ವೀಡಿಯೊ-ಶೇರಿಂಗ್ ಅಪ್ಲಿಕೇಶನ್ ಟಿಕ್‌ ಟಾಕ್, ಟೆನ್ಸೆಂಟ್ ಹೋಲ್ಡಿಂಗ್ಸ್ ವೀಚಾಟ್ ಮತ್ತು ಅಲಿಬಾಬಾದ ಯುಸಿ ಬ್ರೌಸರನ್ನು ಒಳಗೊಂಡಿರುವ 59 ಅಪ್ಲಿಕೇಶನ್ ಗಳಿಗೆ ನಿಷೇಧ ಹೇರಿದಾಗ, ಅದರ ಸುರಕ್ಷತೆ ಮತ್ತು ಗೌಪ್ಯತೆಯ ಬಗ್ಗೆ ನಿಮ್ಮ ನಿಲುವನ್ನು ವಿವರಿಸಲು ಕೇಂದ್ರ ಸೂಚಿಸಿತ್ತು.

ಇದನ್ನೂ ಓದಿ : ಕಾಪು‌ ತಾಲೂಕು ಗಣರಾಜ್ಯೋತ್ಸವ ಆಚರಣೆ : ಧ್ವಜರೋಹಣ ನೆರವೇರಿಸಿದ ಕಾಪು ಶಾಸಕ ಲಾಲಾಜಿ‌ ಆರ್ ಮೆಂಡನ್ -Vishwanews24

ಕೇಂದ್ರ ಸರ್ಕಾರ ಕಂಪೆನಿಗಳು ನೀಡಿರುವ ಪ್ರತಿಕ್ರಿಯೆಗೆ ಸಮಾಧಾನ ತರಲಿಲ್ಲ. ಆದ್ದರಿಂದ, ಈ 59 ಅಪ್ಲಿಕೇಶನ್‌ ಗಳ ಶಾಶ್ವತ ನಿಷೇಧಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಅಪ್ಲಿಕೇಶನ್‌ಗಳು “ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹ ಪೀಡಿತವಾಗಿವೆ” ಎಂದು ಸಚಿವಾಲಯದ ಕಳೆದ ಜೂನ್ ಅಲ್ಲಿ ನೀಡಲಾಗಿದ್ದ ಆದೇಶದಲ್ಲಿ ತಿಳಿಸಿದೆ.

ವಿವಾದಿತ ಹಿಮಾಲಯನ್ ಗಡಿ ಭಾಗದಲ್ಲಿ ಚೀನಾದ ಸೈನಿಕರೊಂದಿಗೆ ಸಂಘರ್ಷ ನಡೆದು 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಆ ಬಳಿಕ ಭಾರತವು ಚೀನಾ ಮೂಲದ 59 ಅಪ್ಲಿಕೇಶನ್ ನನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದನ್ನು “ಡಿಜಿಟಲ್ ಸ್ಟ್ರೈಕ್” ಎಂದು ಕರೆಯಲಾಗಿತ್ತು.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago