Featured

ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು : ಟ್ರಂಪ್ -Vishwanews24

ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು : ಟ್ರಂಪ್ -Vishwanews24

ನ್ಯೂಯಾರ್ಕ್‌: ಕೋವಿಡ್‌ ಹರಡುವಿಕೆಯ ಕಾರಣಕ್ಕೆ ಅಮೆರಿಕ ಹಾಗೂ ಚೀನದ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ಮತ್ತೆ ಚೀನದ ಮೇಲೆ ಕಿಡಿಕಾರಿರುವ ಯುಎಸ್‌ಎ ಅಧ್ಯಕ್ಷ ಟ್ರಂಪ್‌ “ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು’ ಎಂದು ಹೇಳಿದ್ದಾರೆ.

ಕೋವಿಡ್ ಸೋಂಕಿಗೆ “ಚೀನ ವೈರಸ್‌’ ಎಂದೇ ಕರೆಯುತ್ತಿರುವ ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು ಪ್ರಾರಂಭ ವಾದಾಗಿನಿಂದಲೂ ಡ್ರ್ಯಾಗನ್‌ ದೇಶದ ವಿರುದ್ಧ ವಾಗ್ಧಾಳಿ ನಡೆಸುತ್ತಲ್ಲೇ ಬಂದಿದ್ದಾರೆ.

ಇದೀಗ ಸೋಂಕು ನಿಯಂತ್ರಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ನರ್ಸ್‌ಗಳು, ಪೊಲೀಸರಿಗೆ, ಅಂಚೆ ಸಿಬಂದಿ ಜತೆ ಸಮಾಲೋಚನೆ ನಡೆಸಿದ ಟ್ರಂಪ್‌, “ಚೀನ ಎಂಬ ವೈರಾಣುವನ್ನು ಹೊಡೆದೊಡಿಸುವ ಕಾರ್ಯ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. ಜತೆಗೆ ಸೋಂಕು ಹರಡುವಿಕೆ ನಿಯಂತ್ರಿಸುವ ಕಾರ್ಯದಲ್ಲಿ ನಿರತವಾಗಿರುವ ಆರೋಗ್ಯ ಕಾರ್ಯಕರ್ತರು, ವೈದ್ಯರು, ಪೊಲೀಸರ ಕಾರ್ಯ ಶ್ರೇಷ್ಠವಾದದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಫ್ರಿಕಾದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸದ್ಯ ದೇಶದಲ್ಲಿ 12 ಲಕ್ಷ ಗಡಿ ಸಮೀಪಿಸಿದೆ. ಖಂಡದಲ್ಲಿ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 28ಸಾವಿರ ಗಡಿ ದಾಟಿದೆ ಎಂದು ಆಫ್ರಿಕಾ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌ ಆ್ಯಂಡ್‌ ಪ್ರಿವೆನನ್‌ (ಸಿಡಿಸಿ) ತಿಳಿಸಿದೆ. ಜಾಗತಿಕವಾಗಿ ಆಫ್ರಿಕಾ ಸೋಂಕು ಬಿಕ್ಕಟ್ಟು ನಿರ್ವಹಣೆಯಲ್ಲಿ ಹಿಂದುಳಿದಿದ್ದು, ಅಲ್ಲಿನ ಆರೋಗ್ಯ ವ್ಯವಸ್ಥೆ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago