ನವದೆಹಲಿ: ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಹೊಸ ಸಿಡಿಎಸ್ ನೇಮಕಗೊಳ್ಳ ಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಜನರಲ್ ಎಂಎಂ ನರಾವಣೆ ಅವರು ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರು ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ.
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…