ಮೈಸೂರು: ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆಯುತ್ತೇನೆ. ಆದರೆ ನಾನು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ ಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ.
ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಲೇ ಈ ಬಗ್ಗೆ ತೀರ್ಮಾನ ಮಾಡುವುದಿಲ್ಲ ಎಂದರು.
ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲೂ ಒತ್ತಡವಿದೆ. ರಾಜಕೀಯ ಜನ್ಮಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನು ಸೋಲಿಸಿದರು. ಅವರು ನನ್ನ ಸೋಲಿಸಿದರೆಂದು ನಾನು ಅವರನ್ನು ದ್ವೇಷಿಸಲ್ಲ. ಈಗ ಅವರೇ ಮತ್ತೆ ಸ್ಪರ್ಧೆಗೆ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…