ಚುನಾವಣಾ ರಾಜಕೀಯಕ್ಕೆ ಕೈ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ಚುನಾವಣಾ ರಾಜಕೀಯಕ್ಕೆ `ಕೈ’ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿ ಶಾಸಕ ತನ್ವೀರ್ ಸೇಠ್ ಚುನವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.

ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.

`ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ಮಣಿಪಾಲ : 3 ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆ – Vishwanews24

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹೀಗಾಗಿ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ತನ್ವೀರ್ ಸೇಠ್ ನಿವೃತ್ತಿ ವಿಷಯ ತಿಳಿಯುತ್ತಿದ್ದಂತೆ ಮನೆ ಮುಂದೆ ಬೆಂಬಲಿಗರು ದೌಡಾಯಿಸಿದ್ದಾರೆ. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುತಂತೆ ಒತ್ತಡ ಹೇರುತ್ತಿದ್ದಾರೆ. ನೂರಾರು ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿ ನಿವೃತ್ತಿ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ಮಣಿಪಾಲ : 3 ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆ – Vishwanews24

Leave a Reply