Featured

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗ್ರ್ಯಾಂಡ್‌ ಎಂಟ್ರಿ  ; ವಯನಾಡಿನಿಂದ ನಾಮಪತ್ರ ಸಲ್ಲಿಕೆ – vishwanews24

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗ್ರ್ಯಾಂಡ್‌ ಎಂಟ್ರಿ  ; ವಯನಾಡಿನಿಂದ ನಾಮಪತ್ರ ಸಲ್ಲಿಕೆ

ವಯನಾಡ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡು ಕ್ಷೇತ್ರದಲ್ಲಿ ಅದ್ಧೂರಿ ರೋಡ್ ಶೋ ಮಾಡಿದರು. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಮತ್ತು ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ನಂತರ ವಯನಾಡಿನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರದಿಂದ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡುತ್ತಿದ್ದಾರೆ. ಇದು ಪ್ರಿಯಾಂಕಾ ಅವರ ರಾಜಕೀಯ ಜೀವನದ ಮೊದಲ ಚುನಾವಣೆಯಾಗಿದೆ.

ಇಂದು ಬೆಳಗ್ಗೆ ವಯನಾಡಿನ ಕಲ್ಲಾಪೆಟ್ಟಾ ನ್ಯೂ ಬಸ್ ಸ್ಟಾಂಡ್‌ನಿಂದ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಪ್ರಿಯಾಂಕಾ ಗಾಂಧಿ ತೆರಳಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಗಣ್ಯರು ಪ್ರಿಯಾಂಕಾ ಗಾಂಧಿಯವರಿಗೆ ಸಾಥ್ ನೀಡಿದರು. ಅದ್ಧೂರಿ ಮೆರವಣಿಗೆ ಬಳಿಕ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾದರು. ಸಮಾವೇಶದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಂತರ ವಯನಾಡು ಜಿಲ್ಲಾಧಿಕಾರಿ ಕಚೇರಿಗೆ ಪತಿ ಮತ್ತು ಪುತ್ರನ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago