Featured

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ – vishwanews24

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ.

ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ  ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.

ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಾ: ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲಾ ಚುನಾವಣೆಗಳನ್ನು ನಡೆಸಲಾಗುವುದು ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago