ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಹೇಳಿದ್ದಾರೆ.
ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.
ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳುತ್ತೇವೆ. ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಸಹಕಾರ ಕ್ಷೇತ್ರದ ಕಾಯ್ದೆಗೆ ತಿದ್ದುಪಡಿಗಾಗಿ ಕೇಂದ್ರಕ್ಕೆ ಕಳುಹಿಸುವ ಅವಶ್ಯಕತೆಯಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಕೇಂದ್ರಕ್ಕೆ ಕಳುಹಿಸುವ ಅವಶ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಎಂಡಿಸಿಸಿ ಸೇರಿದಂತೆ ಕೆಲ ಡೈರಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಾ: ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶ. ಮುಂದೆ ಎಲ್ಲಾ ಚುನಾವಣೆಗಳನ್ನು ನಡೆಸಲಾಗುವುದು ಎಂದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…