Featured

ಚುನಾವಣಾ ಸಮರಕ್ಕೆ ಸಜ್ಜಾದ ಬಿಜೆಪಿ: ಬಿ ಎಸ್ ವೈ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ

ಬೀದರ್​ : ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇ ಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ ಆರಂಭಿಸಲಿದೆ.

ವಿಧಾನಸಭಾ ಚುನಾವಣೆಯಲ್ಲಿ ದಣಿವರಿಯದಂತೆ ರಾಜ್ಯ ಪ್ರವಾಸ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಅತಿಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಸಫಲರಾದರೂ ಅಧಿಕಾರ ಚುಕ್ಕಾಣಿ ಅವರ ಕೈ ತಪ್ಪಿ ಹೋಗಿತ್ತು. ಈಗ ಆ ತಪ್ಪು ಮತ್ತೆ ಆಗದಂತೆ ಸಿದ್ಧವಾಗಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ಮಾಡಿದ್ದಾರೆ.

ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಘೋಷಣೆಯಾಗಿದ್ದು, ಇದರ ಮೇಲೆ ಕಣ್ಣಿಟ್ಟಿರುವ ಅವರು, ಈ ಬಾರಿ ಮಾತ್ರ ಬಹುಮತ ಗೆಲ್ಲಲ್ಲೇಬೇಕೆಂಬ ಹುಮ್ಮಸ್ಸಿನಲ್ಲಿದ್ದಾರೆ ಇದಕ್ಕಾಗಿ ಮತ್ತೆ ರಾಜ್ಯ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದು, ಇಂದಿನಿಂದ ತಮ್ಮ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮೈತ್ರಿ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾಗಿದ್ದಾರೆ.

ಪ್ರತ್ಯೇಕ ಉತ್ತರ ಕನ್ನಡ ಜಿಲ್ಲೆಯ ಕಾವು ಹೆಚ್ಚಿರುವ ಹಿನ್ನಲೆ ಇದರ ಲಾಭಾ ಪಡೆಯುವ ಉದ್ದೇಶದಿಂದಾಗಿ ಅವರು ಇಂದಿನಿಂದ ಬೀದರ್​ ಕ್ಷೇತ್ರದಿಂದಲೇ ತಮ್ಮ ರಾಜ್ಯ ಪ್ರವಾಸ ನಡೆಸಲಿದ್ದಾರೆ.

ರಾಜ್ಯ ಪ್ರವಾಸದ ಮೊದಲ ದಿನವಾದ ಇಂದು ಕಲ್ಯಾಣನಾಡು ಬೀದರ್ ನ ಪ್ರಸಿದ್ಧ ಶ್ರೀ ಪಾಪನಾಶಿನಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಹಾಗೂ ಜಿಲ್ಲೆಯ ನಾಯಕರ ನೇತೃತ್ವದಲ್ಲಿ ಭೇಟಿನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ಪ್ರವಾಸ ಪ್ರಾರಂಭಿಸಲಾಯಿತು.ವಿಧಾನಸಭಾ ಚುನಾವಣೆಯಲ್ಲಾದ ತಪ್ಪುಗಳಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಮತ್ತೆ ರಾಜ್ಯ ಪ್ರವಾಸ ಮಾಡುವ ಮೂಲಕ ಮತದಾರರ ಓಲೈಕೆಗೆ ಸಜ್ಜಾಗಿದ್ದಾರೆ.  ಈ ವೇಳೆ ಸಂಪೂರ್ಣ ಸಾಲಮನ್ನಾ, ಬಜೆಟ್ ನಿಂದ ಆಗಿರುವ​ ಅನ್ಯಾಯ, ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಮೊದಲಾದ ವಿಷಯಗಳ ಕುರಿತು ಜನರಿಗೆ ಮನವರಿಕೆ ಮಾಡಿ, ಅದರ ಲಾಭ ಪಡೆಯಲು ಕಮಲ ಪಡೆ ನಿರ್ಧರಿಸಿದೆ.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago